ಆರಂಭ ಸುದ್ದಿ ಕನ್ನಡ

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಬೆಳೆ ಹಾನಿ ಪ್ರದೇಶದಕ್ಕೆ ಸಚಿವ ರಹೀಂ ಖಾನ್ ಭೇಟಿ ಶೀಘ್ರದಲ್ಲಿ ಪರಿಹಾರ ಒದಗಿಸುವ ಭರವಸೆ ನೀಡಿದೇ!!!!

www.Arambhsuddikannada.com

ಬೀದರ್  ಆರಂಭ ಸುದ್ದಿ ಕನ್ನಡ 23-08-2025 ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಸಾವಿರಾರು ರೈತರ ಬೆಳೆಗಳು ನಾಶವಾಗಿವೆ. ನಾಲ್ಕು ದಿನಗಳ ಹಿಂದೆ ಬೀದರ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ, ಜಿಲ್ಲೆಯ ಸಾವಿರಾರು ಹೆಕ್ಟೇರ್‌ನಲ್ಲಿ ಬೆಳೆದ ಬೆಳೆಗಳು ನಾಶವಾಗಿವೆ. ನಗರ ಶಾಸಕ ಮತ್ತು ಸಚಿವ ರಹೀಮ್ ಖಾನ್ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಕೆಲವು ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿದರು. ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಯರ್ನಳ್ಳಿ, ಗಡ್ಗಿ, ಚಿಮ್ಕೋಡಾ ಗ್ರಾಮಗಳು ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಮಳೆಯಿಂದ ಹಾನಿಗೊಳಗಾದ ಭೂಮಿ ಮತ್ತು ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅನೇಕ ಭೂಮಿಗಳಲ್ಲಿ ಬೆಳೆದ ಬೆಳೆಗಳು ಮಳೆಯಿಂದ ನಾಶವಾಗಿವೆ ಎಂದು ಹೇಳಿದರು. ಮತ್ತು ನಾಶವಾದ ಬೆಳೆಗಳನ್ನು ಪರಿಶೀಲಿಸಿ, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದರು. ಬೆಳೆ ನಷ್ಟ ಮತ್ತು ಮನೆ ಹಾನಿಯ ಬಗ್ಗೆ ಕಂದಾಯ ಸಚಿವರಿಗೆ ತಿಳಿಸುವುದಾಗಿ ಮತ್ತು ಸಾಧ್ಯವಾದಷ್ಟು ಬೇಗ ರೈತರಿಗೆ ಪರಿಹಾರವನ್ನು ಪಡೆಯಲು ಕೆಲಸ ಮಾಡುವುದಾಗಿ ಹೇಳಿದರು, www.arambhsuddikannada.com

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments