𝗔𝗥𝗔𝗠𝗕𝗛 𝗦𝗨𝗗𝗗𝗜 𝗞𝗔𝗡𝗡𝗔𝗗𝗔

ಬೆಂಗಳೂರು ಕ್ಯಾಂಟ್ ಮತ್ತು ಬೀದರ್ ಒಂದು ಟ್ರಿಪ್ ವಿಶೇಷ ರೈಲು
ಮುಂಬರುವ ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮಂಟ್ ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.



ಬೆಂಗಳೂರು ಆರಂಭ ಸುದ್ದಿ ಕನ್ನಡ 03-12-2025 ದಿನಾಂಕ 24.12.2025 (ಬುಧವಾರ) ರಂದು ರೈಲು ಸಂಖ್ಯೆ 06291 ಬೆಂಗಳೂರು ಕ್ಯಾಂಟ್ - ಬೀದರ್ ವಿಶೇಷ ಎಕ್ಸ್‌ಪ್ರೆಸ್ ಬೆಂಗಳೂರು ಕ್ಯಾಂಟ್‌ನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್ ತಲುಪಲಿದೆ, ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್ ಬೆಂಗಳೂರು ಕ್ಯಾಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ದಿನಾಂಕ 25.12.2025 (ಗುರುವಾರ) ರಂದು ಬೀದರ್‌ನಿಂದ ಮಧ್ಯಾಹ್ನ 1:00ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4:00ಕ್ಕೆ ಬೆಂಗಳೂರು ಕ್ಯಾಂಟ್ ತಲುಪಲಿದೆ.

ಮಾರ್ಗಮಧ್ಯದಲ್ಲಿ, ಈ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ವಿಶೇಷ ರೈಲು 22 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಒಂದು ಎಸಿ 2-ಟೈರ್, ಎರಡು ಎಸಿ 3-ಟೈರ್, ಹನ್ನೊಂದು ಸ್ವೀಪರ್ ಕ್ಲಾಸ್, ಆರು ಜನರಲ್ ಸೆಕೆಂಡ್ ಕ್ಲಾಸ್, ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ. www.arambhsuddikannada.com

Author

Arambh Suddi Kannada News True Newses And Stories Telecasting

Experienced journalist focused on global news, trends, and untold stories — with a commitment to accuracy and impact.

0/Post a Comment/Comments